LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿಗಳಿಗೆ ಶೂನ್ಯ ನೆರಳು ದಿನ ಕಾರ್ಯಕ್ರಮ 

ಬಾಗಲಕೋಟೆ, ಮೇ ೦೫ : ಉಪ ಪ್ರಾದೇಶಿಕ ವಿeನ ಕೇಂದ್ರ ಹಾಗೂ ಬ್ರಿಲಿಯಂಟ್ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಶೂನ್ಯ ನೆರಳು ದಿನದ ಕಾರ್ಯಕ್ರಮವನ್ನು ಬ್ರಿಲಿಯಂಟ್ ಅಕಾಡೆಮಿಯ ಕಾರ್ಯದರ್ಶಿ ಆನಂದ ರಾಠೋಡ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 
ನಂತರ ಮಾತನಾಡಿದ ಆನಂದ ರಾಠೋಡ ಅವರು ಶೂನ್ಯ ನೆರಳಿನ ದಿನದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ತಿಳಿಸುವ ಮಾಹಿತಿಯನ್ನು ವಿದ್ಯಾರ್ಥಿಗಳು ವಿವರವಾಗಿ ತಿಳಿದುಕೊಂಡು ಖಗೋಳ ವಿಜ್ಞಾನದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು. ಸದರಿ ಕಾರ್ಯಕ್ರಮದ ತಮ್ಮ ವಿದ್ಯಾ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಕೇಂದ್ರದ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಿಜಯಕುಮಾರ ಕೆ, ವಿಜ್ಞಾನ ಶಿಕ್ಷಕರು, ಶಂಕ್ರಪ್ಪ ಸಕ್ರಿ ಪ್ರೌಢಶಾಲೆ, ಬಾಗಲಕೋಟೆ ರವರು ಮಾತನಾಡಿ ಶೂನ್ಯ ನೆರಳಿನ ದಿನದ ಸ್ವಾರಸ್ಯಕರ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು. ಅದರಂತೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ವಿವಿಧ ಆಕಾಶ ಕಾಯಗಳು, ನಕ್ಷತ್ರ ಪುಂಜಗಳ ಅಧ್ಯಯನದ ಬಗ್ಗೆ ಅರ್ಥೈಹಿಸಿದರು. ಕಾರ್ಯಕ್ರಮದಲ್ಲಿ ಒಟ್ಟು ೬೪ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸೂರ್ಯನ ಚಲನೆಯನ್ನು ವಿಶೇಷ ಸೂರ್ಯ ಮಸೂರಗಳನ್ನು ಬಳಸಿಕೊಂಡು ನೋಡಲಾಯಿತು. ಮಧ್ಯಾಹ್ನ ೧೨.೨೪ ಘಂಟೆಗೆ ಸೂರ್ಯನ ಕಿರಣಗಳು ಲಂಬವಾಗಿ ಬೀಳುವ ಮೂಲಕ ಸಂಭವಿಸಿದ ಶೂನ್ಯ ನೆರಳನ್ನು ಪ್ರಾಯೋಗಿಕ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಈರಣ್ಣ ಬುಳ್ಳಾ, ತಾಂತ್ರಿಕ ಸಹಾಯಕ ಆಸೀಫ ಬಾಗವಾನ ಸೇರಿದಂತೆ ಇತರರು ಉಪಸ್ಥಿತರಿದ್ದರು. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್